ಬೆಂಗಳೂರಿನಲ್ಲಿ ಫೆಬ್ರುವರಿ 4,5,6 ರಂದು ನಡೆದ 77ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಾಧಕ ಭಾದಕಗಳ
ದೂರದೃಷ್ಟಿಯ ಅವಲೋಕನಾ ಲೇಖನ ಇದು. ಪಬ್ಬು, ಬಾರ್ ಗಳ ಭರಾಟೆಯಂಥ ನಿತ್ಯ ಉತ್ಸವಗಳ ನಗರಿಯಲ್ಲಿ ಅಕ್ಷರ ಜಾತ್ರೆ ಯಶಸ್ವಿಯಾದದ್ದು ಕನ್ನಡದ ಮಟ್ಟಿಗೆ ಆರೋಗ್ಯಕರ ಬೆಳವಣಿಗೆ. ಆದರೆ ಯಶಸ್ವೀ ಎಂಬುದು ಯಾವ ಅರ್ಥದಲ್ಲಿ ಅವಲೋಕಿಸಬಹುದು? 70,000 ದಿಂದ 1,00,000 ಜನ ಇದಕ್ಕೆ ಸಾಕ್ಷಿಯಾದರೆಂದು ಪೇಪರಿನಲ್ಲಿ ಓದುವಾಗ ನಗು ಬಂತು, ಯಾಕೆಂದರೆ, ಇಂದಿನ ಯಾಂತ್ರಿಕ ಜೀವನದಲ್ಲಿ ಜನರನ್ನು ಸೇರಿಸುವುದು ರಾಜಕೀಯ ಗಿಮಿಕ್. ಇರಲಿ, ಸಾಹಿತ್ಯ ಸಮ್ಮೇಳನಗಳ ಇತಿಹಾಸ ಏನಿರಬಹುದು? ಇವುಗಳ ಕೊಡುಗೆ ಕನ್ನಡ ಸಾಹಿತ್ಯಕ್ಕೆ, ಕನ್ನಡ ನಾಡು ನುಡಿಗೆ ಕೊಡುಗೆ ಯಾವ ರೀತಿಯದ್ದು, ಎಂಬುದಕ್ಕೆ ಉತ್ತರ ಹುಡುಕಲು ಇಂಟರ್ನೆಟ್ ನಲ್ಲಿ ಹುಡುಕಿದ್ದು, ತಡಕಾದಿದ್ದು ನಿಮ್ಮ ಮುಂದಿಡುತ್ತಿದ್ದೇನೆ.
ದೂರದೃಷ್ಟಿಯ ಅವಲೋಕನಾ ಲೇಖನ ಇದು. ಪಬ್ಬು, ಬಾರ್ ಗಳ ಭರಾಟೆಯಂಥ ನಿತ್ಯ ಉತ್ಸವಗಳ ನಗರಿಯಲ್ಲಿ ಅಕ್ಷರ ಜಾತ್ರೆ ಯಶಸ್ವಿಯಾದದ್ದು ಕನ್ನಡದ ಮಟ್ಟಿಗೆ ಆರೋಗ್ಯಕರ ಬೆಳವಣಿಗೆ. ಆದರೆ ಯಶಸ್ವೀ ಎಂಬುದು ಯಾವ ಅರ್ಥದಲ್ಲಿ ಅವಲೋಕಿಸಬಹುದು? 70,000 ದಿಂದ 1,00,000 ಜನ ಇದಕ್ಕೆ ಸಾಕ್ಷಿಯಾದರೆಂದು ಪೇಪರಿನಲ್ಲಿ ಓದುವಾಗ ನಗು ಬಂತು, ಯಾಕೆಂದರೆ, ಇಂದಿನ ಯಾಂತ್ರಿಕ ಜೀವನದಲ್ಲಿ ಜನರನ್ನು ಸೇರಿಸುವುದು ರಾಜಕೀಯ ಗಿಮಿಕ್. ಇರಲಿ, ಸಾಹಿತ್ಯ ಸಮ್ಮೇಳನಗಳ ಇತಿಹಾಸ ಏನಿರಬಹುದು? ಇವುಗಳ ಕೊಡುಗೆ ಕನ್ನಡ ಸಾಹಿತ್ಯಕ್ಕೆ, ಕನ್ನಡ ನಾಡು ನುಡಿಗೆ ಕೊಡುಗೆ ಯಾವ ರೀತಿಯದ್ದು, ಎಂಬುದಕ್ಕೆ ಉತ್ತರ ಹುಡುಕಲು ಇಂಟರ್ನೆಟ್ ನಲ್ಲಿ ಹುಡುಕಿದ್ದು, ತಡಕಾದಿದ್ದು ನಿಮ್ಮ ಮುಂದಿಡುತ್ತಿದ್ದೇನೆ.
1915 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಉದಯ. ಆಗ ಮೇರು ಬರಹಗಾರರಿದ್ದರು, ಕನ್ನಡವನ್ನು ತಮ್ಮ ಉಸಿರಾಗಿಸಿಕೊಂಡವರಿದ್ದರು. 1932ರ ಮಡಿಕೇರಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಡಿ.ವಿ.ಜಿ.ಯವರು ಮಂಡಿಸಿದ ವಿಷಯಗಳು, ಕರ್ನಾಟಕದ ಏಕೀಕರಣ ಚಳುವಳಿಯ ಸ್ವರೂಪವನ್ನೇ ಬದಲಾಯಿಸಿದವು. 1948ರಲ್ಲಿ ಬೇಂದ್ರೆ, "ಹಕ್ಕಿ ಹಾರುತಿದೆ ನೋಡಿದಿರಾ", ಎಂದಾಗ ವೇದಿಕೆ ಮುಂದಿದ್ದ ಮೂವತ್ತು ಸಾವಿರ ಜನ ತಲೆಯೆತ್ತಿ ನೋಡಿದ್ದರು. 1958ರಲ್ಲಿ ವಿ.ಕೃ.ಗೋಕಾಕ ಬಳ್ಳಾರಿಯಲ್ಲಿ ಮಂಡಿಸಿದ ಹೊಸ ವಿಚಾರಗಳು ನವ್ಯ ಸಾಹಿತ್ಯ ಎಂಬ ಹೊಸ ಚಳುವಳಿಗೆ ಕಾರಣವಾದವು. 1960ರಲ್ಲಿ ಅ.ನ.ಕೃ ಮಣಿಪಾಲದಲ್ಲಿ, ಬೆಂಗಳೂರಿನಲ್ಲಿನ ಕನ್ನಡದ ಸ್ಥಿತಿಗತಿಗಳು, ಚಿತ್ರರಂಗದ ಪರಿಭಾಷಾ ಒಲವಿನ ಬಗ್ಗೆ ಚರ್ಚೆ ನಡೆದಾಗ, ಡಬ್ಬಿಂಗ್ ವಿರೋಧಿ ಚಳುವಳಿಗಳು ನಡೆದವು. ಇನ್ನೂ ಕೆಲವು ಮೇರು ಕವಿಗಳು ತಮ್ಮ ನಿಲುವಿಗೆ ಬದ್ಧರಾಗಿದ್ದರು. ಕರ್ನಾಟಕ ಏಕೀಕರಣವಾಗುವ ತನಕ ಕುವೆಂಪು ಅಧ್ಯಕ್ಷತೆವಹಿಸುವುದಿಲ್ಲವೆಂದಾಗ, ಅವರ ಪ್ರಕಾರ, ಕರ್ನಾಟಕ ಏಕೀಕರಣವಾದ ಮೇಲೆ ಅಂದರೆ 1957ರಲ್ಲಿ ಅಧ್ಯಕ್ಷತೆ ವಹಿಸಿದರು. ಕನ್ನಡದ ಕೆಲಸಗಳಿಗೆ ಅಡ್ಡಿಯಾಗುವುದೆಂಬ ಕಾರಣಕ್ಕೆ, ಕೊನೆಯವರೆಗೂ ತಿ.ನಂ.ಶ್ರೀ. ಅಧ್ಯಕ್ಷತೆ ವಹಿಸದೇ ಇದ್ದರು.
ಇನ್ನು ಈ ಸಮ್ಮೇಳನದ ವಿಷಯಕ್ಕೆ ಬರೋಣ. ನಾನೂ 70,000 ಜನರಲ್ಲಿ ಒಬ್ಬನಾಗಿ ಸಮ್ಮೇಳನದ ಎಲ್ಲಾ ಚರ್ಚೆಗಳಲ್ಲಿ ಜವಾಬ್ದಾರಿಯುತ ಪ್ರೇಕ್ಷಕನಾಗಿ ಭಾಗವಹಿಸಿದ್ದೇನೆ, ಖುಷಿ ಪಟ್ಟಿದ್ದೇನೆ. ನನ್ನ ಖುಷಿಯನ್ನು ತಮ್ಮೊಂದಿಗೆ ಹಂಚಿಕೊಳ್ಳಲು ಈ ಲೇಖನ.
ಅಧ್ಯಕ್ಷರು-ಪ್ರೊ.ಜಿ.ವೆಂಕಟಸುಬ್ಬಯ್ಯನವರು ಈ ಬಾರಿಯ ಕನ್ನಡದ ತೇರು ಎಳೆದ ಸಾಹಸದ ಸಾರ್ಥಕ ರೂವಾರಿ. ಪ್ರಭಂದ, ವ್ಯಕ್ತಿಚಿತ್ರ, ಸಂಪಾದನೆಯಲ್ಲಿ ಇವರ ಕೊಡುಗೆ ಅನನ್ಯ. ಬಿ.ಎಂ.ಶ್ರೀ. ವೆಂಕಣ್ಣಯ್ಯನವರಂಥ ಕನ್ನಡದ ಸಾಹಿತ್ಯದ ಕಲಿಗಳ ಶಿಷ್ಯರಿವರು. 98ರ ಇಳಿ ವಯಸ್ಸಿನ ಇವರು, ತನು ಮನ ಧನಗಳಿಂದ ಕನ್ನಡ ಕಟ್ಟುವ ಕೆಲಸ ಮಾಡಿದರು. ಜೀ.ವಿ ಎಂದೇ ಪ್ರಖ್ಯಾತರಾದ ಇವರು ಮುಪ್ಪಾಗಿರಬಹುದು ಆದರೆ ಇವರು ಮಾಡಿದ ಕನ್ನಡದ ಕೆಲಸಕ್ಕೆ ಎಂದಿಗೂ ಮುಪ್ಪಿಲ್ಲ.
ಈ ಬಾರಿ ಕೆಲವು ನಿರ್ಣಯಗಳೂ ಮಂಡನೆಯಾದವು , ಕೆಲವು ಸವಕಲು ವಿಷಯಗಳು ಚರ್ಚೆಯಾದವು.
ಆಗಿನ ಈಗಿನ ಹಳ್ಳಿ ಜೀವನ, ಒಂದು ಅನುಪಯುಕ್ತ ಚರ್ಚೆ ನಡೆಯುತ್ತಿತ್ತು,
ಒಬ್ಬ ಮಹಾನುಭಾವ ಆಗಿನ ಹಳ್ಳಿ ಜೀವನವೇ ಚನ್ನಾಗಿತ್ತು, ಈಗೆಲ್ಲ ಯಾಂತ್ರಿಕವಾಗಿದೆ ಎಂದ. ಅರ್ರೇ, ಬದಲಾವಣೆ ಜಗದ ನಿಯಮವಲ್ಲವೇ?, ಕಾಲಕ್ಕೆ ತಕ್ಕಂತೆ ಜನ ಬದಲಾಗುತ್ತಾರೆ, ತಪ್ಪೇನಿಲ್ಲ. ಹಾಗೆ, ಮತ್ತೊಂದು ವಿಷಯ ಚರ್ಚೆ ಕೂಡಾ ಆಯಿತು, 20 ರಿಂದ 30 ವರ್ಷದ ಯುವಕರು ಪೇಟೆಗಳತ್ತ ಮುಖ ಮಾಡುತ್ತಿದ್ದಾರೆ. ಅವರೆಲ್ಲ ತಿರುಗಿ ಹಳ್ಳಿಗಳತ್ತ ಹೊರಡಬೇಕು ಎಂದು ಆಜ್ಞೆಯನ್ನೂ ಮಾಡಿದರು. ಆದರೆ ದಿನಗೂಲಿ 200 ರೂಪಾಯಿ ಕೂಡ ಸಿಗದ ಹಳ್ಳಿಯಲ್ಲಿ ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳುವುದು ಕಷ್ಟವಾಗಿರುವಾಗ ಪೇಟೆಗಳತ್ತ ಮುಖ ಮಾಡುವುದರಲ್ಲಿ ತಪ್ಪೇನಿದೆ. ಇಂಥ ವಿಷಯಗಳನ್ನು ಚರ್ಚಿಸುವಾಗ ವಾಸ್ತವಿಕತೆ, ವ್ಯೆಜ್ಞಾನಿಕತೆಯನ್ನು ಮನಗಂಡು ವಿಷಯಗಳನ್ನು ಆಯ್ಕೆ ಮಾಡಬೇಕೆಂಬುದು ನನ್ನ ಅನಿಸಿಕೆ.
ಮುಖ್ಯವಾದ ಸಂಗತಿ ನಿರ್ಣಯಗಳದ್ದು, ಸಮ್ಮೇಳನದ ಫಲವಾಗಿ ಇಂಥ ನಿರ್ಣಯ ಜನಾಭಿಪ್ರಾಯವಾಗಿ ರೂಪುಗೊಂಡು, ಕಾರ್ಯ ರೂಪಕ್ಕೆ ಬಂದಿತು ಎಂದು ಹೇಳಬಲ್ಲ ಉದಾಹರಣೆ ಇದುವರೆಗೂ ಸಿಕ್ಕಿಲ್ಲ. ಸಮ್ಮೇಳನಾಧ್ಯಕ್ಷರು ೩ ದಿನಗಳ ವೈಭವಕ್ಕೆ ಸೀಮಿತವಾಗಿಬಿಟ್ಟಿದ್ದಾರೆ. ಅವರ ಭಾಷಣ ಔಪಚಾರಿಕ ವಿಧಿಯಾಗಿಬಿಟ್ಟಿದೆ, ೩ ದಿನ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತದೆ. ನಿರ್ಣಯಗಳ ವಿವರಗಳೂ ಬರುತ್ತವೆ, ನಂತರ ಎಲ್ಲವೂ ತಣ್ಣಗಾಗುತ್ತವೆ. ಕನಿಷ್ಠ ಚರ್ಚೆ ಕೂಡ ನಡೆಯುವದಿಲ್ಲ.
ನಿರ್ಣಯ ಎಂದರೆ ಕಾವೇರಿ ಚಳುವಳಿ, ಬೆಳಗಾವಿ ಕರ್ನಾಟಕದ್ದೇ, ಗೋಕಾಕ್ ಚಳುವಳಿ ಇತ್ಯಾದಿ.
ನಿರ್ಣಯಗಳು ಮೊದಲು ಜನಾಭಿಪ್ರಾಯವಾಗಿ ರೂಪುಗೊಳ್ಳಬೇಕು, ನಂತರ ಚರ್ಚೆಯಾಗಿ ಅದನ್ನು ಕಾರ್ಯಗತಗೊಳಿಸಬೇಕು. ಪ್ರತಿ ಸಮ್ಮೇಳನಾಧ್ಯಕ್ಷರನ್ನು ಒಂದು ವರ್ಷದ ಅವಧಿಯವರೆಗೆ ಸಾಕ್ಷಿ ಪ್ರಜೆಯಾಗಿ ನಿಯಮಿಸಬೇಕೆಂಬುದು ಪರಿಷತ್ತಿನ ಆಗ್ರಹ, ಆದರೆ ಯಾವ ರಾಜಕೀಯ ಪಕ್ಷಗಳೂ ಒಂದು ಖುರ್ಚಿಯನ್ನು ಬಿಡುವುದಿಲ್ಲ ಎಂಬುದು ಅಷ್ಟೇ ಕಟುಸತ್ಯ.
ಬೇರೆ ರಾಜ್ಯಗಳಿಂದ ಬಂದವರು ಕನ್ನದಲ್ಲಿ ಕಲಿತು ಬಳಸಬೇಕೆಂಬುದು ಈ ಬಾರಿಯ 10 ನಿರ್ಣಯಗಳಲ್ಲಿ ಒಂದಾಗಿತ್ತು. ಆದರೆ ಕನ್ನಡಿಗರೇ ಕನ್ನಡವನ್ನು ಬಳಸುವಲ್ಲಿ ಅನಾಸ್ಥೆ ತೋರುವಾಗ, ಬೇರೆಯವರು ಹೇಗೆ ಕಲಿತಾರು?
'ಕನ್ನಡ ಪದ ಎಂಬುದು ಕಬ್ಬಿಣದ ಕಡಲೆಯಲ್ಲ, ಹಿರಿದಿದೆ ಕನ್ನಡದ ಅರ್ಥ' ಎಲ್ಲೋ ಓದಿದ ನೆನಪು. ಅರ್ಥ ತಿಳುದುಕೊಂಡವನೇ ಸಾರ್ಥಕ ಜೀವಿ, ಕನ್ನಡದ ಮುದ್ದಣರಿಂದ ಹಿಡಿದು ಈಗಿನ ಮುಂಗಾರು ಮಳೆಯ ತನಕ ಸಾಹಿತ್ಯ ಕೃಷಿಯಾಗಿದೆ, ಇನ್ನು ಮುಂದಿನ ಪೀಳಿಗೆಯ ಕನ್ನಡದ ಉಳಿವು-ಅಳಿವು ನಮ್ಮ ಯುವ ಜನಾಂಗದ ಕೈಯಲ್ಲಿದೆ. ಮಾಯಾನಗರಿಗಳ ಮಲ್ಟಿಪ್ಲೆಕ್ಸ್ ಬೆಂಗಳೂರಿನಲ್ಲಿ ಅಕ್ಷರ ಜಾತ್ರೆಗೆ ಜನಗಳ ಸಾಥ್ ಸಿಕ್ಕಿರುವುದು, ಕನ್ನಡದ ಕೆಲಸಗಳಿಗೆ ಪ್ರೋತ್ಸಾಹವಿದ್ದಂತೆ.
ತಮ್ಮ ಮನಸ್ಸಿಗೆ ತಟ್ಟಿದರೆ ಮರುತ್ತರ ಬರೆಯಿರಿ, ತಟ್ಟದಿದ್ದರೂ ಬರೆಯಿರಿ.
ಜವಾಬ್ದಾರಿಯುತ ಕನ್ನಡಿಗ,
ಅರವಿಂದರಾಜ ಬಿ ದೇಸಾಯಿ.
desai tamma baraha nijakku adhbutavaagittu.
ReplyDeleteits really good le,,,,i think our govt should impliment these,,, nice job buddy keep it up
ReplyDeleteultimate maga....ninu kannada da kanda maga,i like it ninu superrrrrrrr desai
ReplyDeleteultimate maga....ninu kannada da kanda maga,i like it ninu superrrrrrrr desai
ReplyDeletenice blog desai....keep writing.... in future u ill also become president of sammelana......
ReplyDeletedesai ninu olle barahagara le nijakku odi tumba kushiyaytu.....ninninda innu olle krutigalige ashe padavu ninna geleya...
ReplyDeletele so i cal u as born chuthya....realy its v.informative and effective..realy dude u can change kannadas image..........you have it in you le.........plz keep dng it and plz plz enter politics....realy i m very glad of ur work..........love u DHANI...
ReplyDeleteGood work :)
ReplyDeletethank you everyone for your kind hearted support..
ReplyDeletehello
ReplyDeleteread ur blog,my mom too.
she is happy tat u wrote it kannada.
however what i felt is u should write about t authors views and ur views abt it.
any ways hats off for ur initiative...
- Show quoted text -
very good one arvind....keep it up!!!!!!!
ReplyDelete@prady & sindhu: thank u very much
ReplyDelete